Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನನ್ನು ವಿಮರ್ಶಿಸುವವರಿಗೆ ನನ್ನ ಪ್ರತ್ಯುತ್ತರವೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನ್ನನ್ನು ಟೀಕಿಸುವವರಿಗೆ ನನ್ನ ಉತ್ತರ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನನ್ನು ವಿಚಾರಿಸುವವರಿಗೆ ಇದೇ ನನ್ನ ಉತ್ತರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕೆಲವು ಜನರು ನಮ್ಮನ್ನು ವಿಚಾರಣೆ ಮಾಡಲು ಬಯಸುತ್ತಾರೆ. ನಾನು ಅವರಿಗೆ ಕೊಡುವ ಉತ್ತರ ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಾಜಿ ಇಚಾರ್ನಿ ಕರ್ತಲ್ಯಾಕ್ನಿ ಮಾಜಿ ಜವಾಬ್ ಅಸೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:3
14 ತಿಳಿವುಗಳ ಹೋಲಿಕೆ  

ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.


ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು.


“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.


ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು