Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾ ಜನರು ರಕ್ಷಿಸಲ್ಪಡಬೇಕೆಂದು, ಸತ್ಯವನ್ನು ತಿಳಿದು ಕೊಳ್ಳಬೇಕೆಂದು ದೇವರು ಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಸಗ್ಳ್ಯಾಕ್ನಿ ಸುಟ್ಕಾ ಹೊವ್ಚೆ ಅನಿ ಸಗ್ಳ್ಯಾನಿ ಖರೆ ಶಾನ್ಪಾನ್ ಕಳ್ವುನ್ ಘೆವ್ಚೆ ಮನುನ್ ಆಶಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:4
32 ತಿಳಿವುಗಳ ಹೋಲಿಕೆ  

ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.


ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.


ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಸಭೆಯ ಹಿರಿಯನಾದ ನಾನು, ದೇವರು ಆಯ್ಕೆ ಮಾಡಿರುವ ಅಮ್ಮನವರಿಗೂ, ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು