Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳಬೇಕೆಂದಿರುವವನು ಒಳ್ಳೇ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಸಾಂಗ್ತಲಿ ಹಿ ಸಂಗ್ತಿಯಾ ಖರ್ಯಾಚಿ ತಾಂಡ್ಯಾಚೊ ಮುಖಂಡ್ ಹೊವ್ಚೆ ಮನುನ್ ಯವಜ್ತಲೊ ಮಾನುಸ್ ಸಗ್ಳೆ ಕಾಮ್ ಎಗ್ದಮ್ ಬರೆ ಹೊವ್ಚೆ ಮನುನ್ ವಿಶ್ವಾಸ್ ಕರ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 3:1
19 ತಿಳಿವುಗಳ ಹೋಲಿಕೆ  

ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,


ಈ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,


ಅವನ ವಿಷಯವಾಗಿ, ಅವನ ಮನೆ ಹಾಳಾಗಲಿ, ಅದು ಜನರಿಲ್ಲದೆ ಪಾಳುಬೀಳಲಿ ಎಂತಲೂ ಅವನ ನಾಯಕತ್ವದ ಹುದ್ದೆಯು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದಿದೆಯಲ್ಲಾ.


ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು