Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಿಯಾ ಎಕ್ ದಾಂಡ್ಗೊ ಮನುನ್ ಲೊಕಾನಿ ತುಕಾ ಬಾರಿಕ್ ಮನುನ್ ಯವ್ಜಿಸರ್ಕೆ ರ್‍ಹಾವ್‍ನಕೊ, ತುಜ್ಯಾ ಬೊಲ್ನ್ಯಾತ್, ಚಾಲಿತ್ ಪ್ರೆಮಾತ್ ಅನಿ ವಿಶ್ವಾಸಾತ್ ಸಗ್ಳ್ಯಾಕ್ನಿ ಪವಿತ್ರ್ ಜಿವನಾತ್ ತಿಯಾ ಉದಾರನ್ ಹೊವ್ನ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:12
19 ತಿಳಿವುಗಳ ಹೋಲಿಕೆ  

ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ನಾನು ಹೇಳುವುದನ್ನು ಯೋಚಿಸು. ಕರ್ತನು ಎಲ್ಲಾದರಲ್ಲಿಯೂ ನಿನಗೆ ವಿವೇಕವನ್ನು ದಯಪಾಲಿಸುವನು.


ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು