Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ಸತ್ಯಕ್ಕೆ ಹೊಂದಿಕೆಯಾಗದ ಕ್ಷುಲ್ಲಕ ಕಥೆಗಳನ್ನು ಜನರು ಹೇಳುತ್ತಾರೆ. ಆ ಕಥೆಗಳ ಬೋಧನೆಯನ್ನು ಅನುಸರಿಸಬೇಡ. ದೇವರಿಗೆ ನಿಜವಾದ ಸೇವೆ ಮಾಡಲು ನಿನಗೆ ನೀನೇ ಬೋಧಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಅಜ್ಜಿಯಾಂಚಿ ದೆವಸ್ಪಾನ್‍ನಸಲ್ಲ್ಯಾ ಕಲ್ಪನ್ ಕರುನ್ ಸಾಂಗ್ತಲ್ಯಾ ಕಾನಿಯಾಕ್ನಾ ಧುರ್ ರ್‍ಹಾ, ಅನಿ ದೆವಾಚಿ ಸೆವಾ ಕರುಕ್ ತಿಯಾ ಅಪ್ನಾಕುಚ್ ಶಿಕುನ್ ಘೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:7
20 ತಿಳಿವುಗಳ ಹೋಲಿಕೆ  

ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.


ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು,


ಆದರೆ ಬುದ್ಧಿಯಿಲ್ಲದ ತರ್ಕಗಳಿಂದಲೂ, ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.


ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.


ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.


ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.


ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು