Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ತ್ಯಾ ದೆವಾಚೊ ಲೆಕ್ ಸರ್‍ಗಾ ವೈನಾ ಯೆತಲಿ ವಾಟ್ ಬಗುನ್ಗೆತ್ ಹಾಸಿ, ತೆಚೊ ಲೆಕ್ ಜೆಜು ಕ್ರಿಸ್ತ್, ತೆಕಾ ತೆನಿ ಮರಲ್ಲ್ಯಾತ್ನಾ ಝಿತ್ತೊ ಕರುನ್ ಉಟ್ವುಲ್ಯಾನಾಯ್, ಅನಿ ತೊ ಅಮ್ಕಾ ದೆವಾಚ್ಯಾ ರಾಗಾತ್ನಾ ಬಚಾವ್ ಕರುಕ್ ಯೆವ್ಕ್ ಲಾಗ್ಲಾ ಮನ್ತಲ್ಯಾ ವಿಶಯಾತ್ ಬೊಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:10
46 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.


ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ಹೀಗಿರಲಾಗಿ ಯೋಹಾನನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟುಬಂದ ಜನರ ಗುಂಪಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಕಾಣಬರುವ ದೇವರ ಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮಗೆ ಎಚ್ಚರಿಕೆಕೊಟ್ಟವರಾರು?


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,


ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.


ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.


ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,


ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.


ಹೀಗೆ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಕ್ರಿಸ್ತನನ್ನು ನಂಬುವವರೆಲ್ಲರಿಗೆ ಮಾದರಿಯಾದಿರಿ.


ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು.


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು