Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪ್ರಧಾನದೂತನ ಶಬ್ದದೊಡನೆಯೂ ದೇವರ ತುತೂರಿಧ್ವನಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹುಕುಮಾಚಿ ಗಜ್ನಿ, ಪ್ರದಾನ್ ದೆವಾಚ್ಯಾ ದುತಾಂಚ್ಯಾ ಬಲ್ವನಿಕ್ ಅನಿ ದೆವಾಚ್ಯಾ ಪಂವ್ಯಾಚ್ಯಾ ಆವಾಜಾಕ್, ಧನಿ ಸ್ವತಾ ಸರ್‍ಗಾ ವೈನಾ ಉತ್ರುನ್ ಯೆತಾ, ತನ್ನಾ ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮರಲ್ಲಿ ಲೊಕಾ ಅದ್ದಿ ಝಿತ್ತಿ ಹೊವ್ನ್ ಉಟ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:16
33 ತಿಳಿವುಗಳ ಹೋಲಿಕೆ  

ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,


“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.


ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.


ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.


ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು