Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದಾವೀದನ ಸೈನ್ಯದಲ್ಲಿ ಪರಾಕ್ರಮಿಗಳಿದ್ದರು. ಈ ಪರಾಕ್ರಮಿಗಳು ದಾವೀದನ ರಾಜ್ಯದಲ್ಲಿ ದಾವೀದನೊಂದಿಗೆ ಮಹಾಬಲಿಷ್ಠರಾದರು. ಅವರು ಮತ್ತು ಎಲ್ಲಾ ಇಸ್ರೇಲರು ದಾವೀದನಿಗೆ ಬೆಂಬಲ ನೀಡಿ ಅವನನ್ನು ರಾಜನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನದ ಪ್ರಕಾರವೇ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:10
13 ತಿಳಿವುಗಳ ಹೋಲಿಕೆ  

ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ಯುದ್ಧವೀರರೂ, ಸೇನಾಧಿಪತಿಗಳೂ ಆದ ಇವರೆಲ್ಲರೂ ಸುಲಿಗೆ ಗುಂಪುಗಳಿಗೆ ವಿರೋಧವಾಗಿ ದಾವೀದನಿಗೆ ಸಹಾಯಮಾಡುವವರಾದರು.


ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.


ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.


ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು