Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ನಿನ್ನ ದೇವರಾದ ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿ ಎಂದು ಹೇಳಿದ್ದಾನಷ್ಟೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಂದೆ ನೀನು ನಮ್ಮನ್ನು ಯುದ್ಧದಲ್ಲಿ ನಡೆಸಿರುವೆ. ಆಗ ಸೌಲನು ಅರಸನಾಗಿದ್ದರೂ ನೀನು ನಮ್ಮ ಯುದ್ಧದಲ್ಲಿ ನಾಯಕನಾಗಿದ್ದೆ. ಯೆಹೋವನು ನಿನಗೆ, ‘ದಾವೀದನೇ, ನೀನು ನಿನ್ನ ಜನರಾದ ಇಸ್ರೇಲರ ಪಾಲಕನಾಗಿರಬೇಕು. ನನ್ನ ಜನರಿಗೆ ನೀನು ನಾಯಕನಾಗಿರಬೇಕು’” ಎಂದು ಹೇಳಿದ್ದಾನಲ್ಲವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:2
16 ತಿಳಿವುಗಳ ಹೋಲಿಕೆ  

ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.


ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.


ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.


“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.


ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, ‘ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು