Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೋವಾಬನ ತಮ್ಮನಾದ ಅಬ್ಷೈಯು [ಬೇರೆ] ಮೂರು ಮಂದಿಯಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:20
10 ತಿಳಿವುಗಳ ಹೋಲಿಕೆ  

ಆಗ ದಾವೀದನು ಹಿತ್ತಿಯನ ಮಗನಾದ ಅಹೀಮೆಲೆಕನಿಗೂ, ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದ್ದಕ್ಕೆ ಅಬೀಷೈಯು, “ನಾನು ಬರುತ್ತೇನೆ” ಎಂದು ಉತ್ತರ ಕೊಟ್ಟನು.


ಚೆರೂಯ ಮತ್ತು ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ ಮತ್ತು ಅಸಾಹೇಲ್ ಎಂಬವರು ಚೆರೂಯಳ ಮಕ್ಕಳು.


ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.


ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.


ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.


ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಆದರೆ ದಾವೀದನು “ತಮ್ಮ ಜೀವವನ್ನು ಪರಿಗಣಿಸದೆ ಪರಾಕ್ರಮದಿಂದ ಈ ನೀರನ್ನು ತಂದು ಕೊಟ್ಟಿದ್ದಾರೆ. ಈ ನೀರನ್ನು ಕುಡಿದರೆ ಈ ಪರಾಕ್ರಮಶಾಲಿ ವೀರರ ರಕ್ತವನ್ನು ಕುಡಿದಂತೆ ಆಗುವುದು. ಇಂತಹ ಕಾರ್ಯವನ್ನು ನನ್ನಿಂದ ಆಗದಂತೆ ನನ್ನ ದೇವರು ತಡೆಯಲಿ” ಎಂದು ಹೇಳುತ್ತಾ, ಆ ನೀರನ್ನು ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.


ಉಳಿದ ಇಬ್ಬರಿಗಿಂತ ಇವನೇ ಘನತೆಯುಳ್ಳವನಾಗಿದ್ದು ಅವರ ನಾಯಕನಾದನು. ಆದರೂ ಇವನು ಮೊದಲಿನ ಮೂರು ಜನರಿಗೆ ಸಮಾನನಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು