Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ವಿುಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪಟ್ಟಣದ ಸುತ್ತಲೂ ದಾವೀದನು ಕೋಟೆಯನ್ನು ಕಟ್ಟಿಸಿದನು. ಮಿಲ್ಲೋವಿನಿಂದ ಪ್ರಾರಂಭಿಸಿ ಕೋಟೆಯವರೆಗೆ ಪಟ್ಟಣವನ್ನು ಕಟ್ಟಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:8
8 ತಿಳಿವುಗಳ ಹೋಲಿಕೆ  

ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.


ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,


ಸೊಲೊಮೋನನ ಬಿಟ್ಟೀ ಕೆಲಸದವರು ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.


ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.


ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.


ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.


ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು