Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರಸ್ವಾಮಿ ವಾಗ್ದಾನ ಮಾಡಿದಂತೆ ಸೌಲನಿಗೆ ಬದಲಾಗಿ ದಾವೀದನನ್ನು ಅರಸನನ್ನಾಗಿ ಮಾಡಲು, ಅನೇಕ ಸಿದ್ಧಸೈನಿಕರು ಹೆಬ್ರೋನಿಗೆ ಬಂದು ದಾವೀದನ ಸೈನ್ಯದಲ್ಲಿ ಸೇರಿದರು. ಅವರ ಸಂಖ್ಯೆಗಳು ಈ ಕೆಳಕಂಡಂತಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪು ಗುಂಪುಗಳಾಗಿ ಬಂದ ಯುದ್ಧಸನ್ನದ್ಧರ ಲೆಕ್ಕ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದಾವೀದನು ಹೆಬ್ರೋನಿನಲ್ಲಿದ್ದಾಗ ಯುದ್ಧಸನ್ನದ್ಧರಾಗಿದ್ದವರು ದಾವೀದನಿಗೆ ಸೌಲನ ರಾಜ್ಯವನ್ನು ಕೊಡಲು ಬಂದರು. ಇದು ಯೆಹೋವನು ಮುಂತಿಳಿಸಿದಂತೆ ಆಯಿತು. ಅವರ ಸಂಖ್ಯೆಯು ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:23
13 ತಿಳಿವುಗಳ ಹೋಲಿಕೆ  

ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಯೆಹೋವನು ಅವನನ್ನು ಕೊಲ್ಲಿಸಿ, ರಾಜ್ಯವನ್ನು ಇಷಯನ ಮಗನಾದ ದಾವೀದನಿಗೆ ಒಪ್ಪಿಸಿದನು.


ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು.


ಯೆಹೂದ್ಯರಿಂದ ಬರ್ಜಿ, ಗುರಾಣಿಗಳನ್ನು ಹಿಡಿದ ಸೈನಿಕರು ಆರು ಸಾವಿರದ ಎಂಟನೂರು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು