Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಅಲ್ಲಿ ಮೂರು ದಿನ ದಾವೀದನ ಸಂಗಡ ಇದ್ದು ಅನ್ನ ಪಾನಗಳನ್ನು ತೆಗೆದುಕೊಂಡರು. ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ಅಲ್ಲಿ ಮೂರು ದಿವಸ ದಾವೀದನ ಸಂಗಡ ಇದ್ದು ಅನ್ನಪಾನಗಳನ್ನು ತೆಗೆದುಕೊಂಡರು; ಅವರ ಸಹೋದರರು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ಜನರೆಲ್ಲಾ ದಾವೀದನೊಂದಿಗೆ ಮೂರು ದಿನಗಳನ್ನು ಕಳೆದರು. ಅವರ ಕುಟುಂಬದವರು ತಯಾರಿಸಿದ ಆಹಾರವನ್ನು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:39
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.


ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು.


ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು, ಯೆಹೋವನ ವಾಕ್ಯಾನುಸಾರವಾಗಿ ಇಸ್ರಾಯೇಲರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು