Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚ್ಉಜ್ಜ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್‌ಉಜ್ಜ” ಎಂಬ ಹೆಸರೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 13:11
11 ತಿಳಿವುಗಳ ಹೋಲಿಕೆ  

ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.


ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.


ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,


ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು, ಈ ತಪ್ಪಿಗೆ ಅವನನ್ನು ಸಂಹರಿಸಿದನು. ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.


ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು.


ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.


ಉಜ್ಜನು ಮಂಜೂಷದ ಮೇಲೆ ಕೈಹಾಕಿದ್ದರಿಂದ ಯೆಹೋವನು ಅವನ ಮೇಲೆ ಕೋಪಗೊಂಡು ಅವನನ್ನು ಹತಮಾಡಿದನು. ಅವನು ಅಲ್ಲೇ ದೇವರ ಸನ್ನಿಧಿಯಲ್ಲಿ ಸತ್ತನು.


ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು


ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.


ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು