Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬಾಕಾಮರಗಳ ತುದಿಯಲ್ಲಿ ಹೆಜ್ಜೆಗಳ ಶಬ್ದವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನನ್ನು ಮುನ್ನಡೆಸುತ್ತಿದ್ದಾನೆ ಎಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳವು ಕೇಳಿಸುವಾಗಲೇ ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಬ್ಬ ಕಾವಲುಗಾರನನ್ನು ಮರಕ್ಕೆ ಹತ್ತಿಸು; ಫಿಲಿಷ್ಟಿಯರು ಬರುವ ಸಪ್ಪಳ ಕೇಳಿದೊಡನೆ ಅವರ ಮೇಲೆ ದಾಳಿಮಾಡು. ನಾನು ನಿನ್ನ ಮುಂದಾಗಿ ಹೋಗಿ ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:15
16 ತಿಳಿವುಗಳ ಹೋಲಿಕೆ  

ಆಗ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಫಕ್ಕನೆ ಆಕಾಶದೊಳಗಿಂದ ಒಂದು ಶಬ್ದವುಂಟಾಗಿ ಅವರು ಕುಳಿತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.


ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.


ಆದುದರಿಂದ, ನಾನು ಅವನ ಮೇಲೆ ಭಯದ ಆತ್ಮವನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಹೋಗಿ ಅಲ್ಲಿ ಕತ್ತಿಯಿಂದ ನಾಶವಾಗುವಂತೆ ಮಾಡುವೆನು’ ಎಂಬುದಾಗಿ ಯೆಹೋವನು ನಿಮ್ಮ ಯಜಮಾನನಿಗೆ ಹೇಳುತ್ತಾನೆ” ಎಂದು ಉತ್ತರಕೊಟ್ಟನು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,


ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.


ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.


ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, “ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು.


ದಾವೀದನು ದೇವರ ಆಜ್ಞಾನುಸಾರವಾಗಿ ಮಾಡಿದನು. ಇಸ್ರಾಯೇಲರು ಫಿಲಿಷ್ಟಿಯರ ಸೈನ್ಯವನ್ನು ಗಿಬ್ಯೋನಿನಿಂದ ಗೆಜೆರಿನ ವರೆಗೂ ಸಂಹರಿಸುತ್ತಾ ಹೋದರು.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು