Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವರ ಮಂಜೂಷಕ್ಕಾಗಿಯೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾವೀದನು ತನ್ನ ನಗರದಲ್ಲಿ ತನಗೋಸ್ಕರ ಮನೆಗಳನ್ನು ಕಟ್ಟಿಸಿದ್ದಲ್ಲದೆ ದೇವಮಂಜೂಷಕ್ಕೋಸ್ಕರವೂ ಸ್ಥಳವನ್ನು ಸಿದ್ಧಮಾಡಿ ಗುಡಾರವನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನ ಪಟ್ಟಣಗಳಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿಕೊಂಡು, ದೇವರ ಮಂಜೂಷಕ್ಕೋಸ್ಕರ ಸ್ಥಳಗಳನ್ನು ಸಿದ್ಧಮಾಡಿ, ಅದರ ನಿಮಿತ್ತ ಗುಡಾರ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:1
14 ತಿಳಿವುಗಳ ಹೋಲಿಕೆ  

ಅವರು ದೇವರ ಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಮಾಡಿಸಿದ್ದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.


ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.


ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.


ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.


ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿಟ್ಟರು. ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಮಂಜೂಷವು ವಿಶ್ರಾಂತಿಹೊಂದಿದ ಮೇಲೆ ದಾವೀದನಿಂದ ಯೆಹೋವನ ಆಲಯದಲ್ಲಿ ವಾದ್ಯ ಸೇವೆಗೆ ನೇಮಿಸಲ್ಪಟ್ಟವರ ಪಟ್ಟಿ.


ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.


ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತಾನು ಅದನ್ನಿರಿಸಲು ಸಿದ್ಧ ಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕಾಗಿ ಗುಡಾರವನ್ನು ಮಾಡಿಸಿದ್ದನು.


ಆಗ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೆಲ್ಲರನ್ನು, ಕುಲಾಧಿಪತಿಗಳೆಲ್ಲರನ್ನು ಹಾಗೂ ಇಸ್ರಾಯೇಲರ ಗಣ್ಯ ವ್ಯಕ್ತಿಗಳೆಲ್ಲರನ್ನು ಯೆರೂಸಲೇಮಿಗೆ ಕರೆಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು