Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:2
17 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.


ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ” ಎಂದನು.


“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.


ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ.


ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ಯೆಹೋವನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದ ನಂತರ, ದಾವೀದನು ಒಂದು ಎತ್ತನ್ನೂ ಕೊಬ್ಬಿದ ಕರುವನ್ನೂ ಯಜ್ಞಮಾಡಿದನು.


ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.


“ನೀನು ಲೇವಿಯ ಕುಲದವರನ್ನು ಹತ್ತಿರಕ್ಕೆ ಕರೆದು ಅವರು ದೇವರ ಸೇವಕಾರ್ಯಕ್ಕಾಗಿ ಯಾಜಕನಾದ ಆರೋನನ ಕೈಕೆಳಗಿರುವಂತೆ ಅವನ ಮುಂದೆ ನಿಲ್ಲಿಸು.


“ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು