Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆತನ ದಾಸ ಇಸ್ರಯೇಲನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನ ಸೇವಕನಾದ ಇಸ್ರೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 16:12
17 ತಿಳಿವುಗಳ ಹೋಲಿಕೆ  

ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ ನನ್ನ ಪ್ರಾಣವು ಜಜ್ಜಿಹೋಗಿದೆ.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.


ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ.


ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.


ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.


ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.


ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.


ಮಹತ್ಕಾರ್ಯಗಳನ್ನು, ನ್ಯಾಯ ನಿರ್ಣಯಗಳನ್ನು ಸ್ಮರಿಸಿರಿ.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನೆಂಬಾತನು ನಮ್ಮ ದೇವರು, ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು