Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 (ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 (ತೋವಿಗೂ ಹದರೆಜರನಿಗೂ ವಿರೋಧವಿತ್ತು.) ದಾವೀದನು ಹದರೆಜರನ ಮೇಲೆ ಬಿದ್ದು ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:10
6 ತಿಳಿವುಗಳ ಹೋಲಿಕೆ  

ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.


ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.


ಶೆಬಾದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಯೆರೂಸಲೇಮಿಗೆ ಬಂದಳು. ಆಕೆಯು ಸುಗಂಧದ್ರವ್ಯ, ಲೆಕ್ಕವಿಲ್ಲದಷ್ಟು ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾ ಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತು ಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು