Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:3
11 ತಿಳಿವುಗಳ ಹೋಲಿಕೆ  

ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.


ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.


ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು


ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.


ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.


ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.


ಅನಂತರ ಸೊಲೊಮೋನನು ಚೋಬ ರಾಜ್ಯದ ಹಮಾತಿಗೆ ಬಂದು ಅದನ್ನು ಸ್ವಾಧೀನಮಾಡಿಕೊಂಡನು.


ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು