Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನ ಸಾವಿರ ರಥಗಳನ್ನೂ ಏಳುಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:4
11 ತಿಳಿವುಗಳ ಹೋಲಿಕೆ  

ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.


ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.


ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ರಥಗಳನ್ನು ಸುಟ್ಟುಬಿಟ್ಟನು.


ಆಗ ಯೆಹೋವನು “ಯೆಹೋಶುವನಿಗೆ ನೀನು ಅವರಿಗೆ ಹೆದರಬೇಡ. ನಾಳೆ ಇದೇ ವೇಳೆಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು, ಇಸ್ರಾಯೇಲರು ಅವರನ್ನು ಸಂಹರಿಸಿ ಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ರಥಗಳನ್ನು ಸುಟ್ಟುಬಿಡಬೇಕು” ಅಂದನು.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.


ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.


ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು