Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆ ತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನು, “ನಾಹಾಷನು ನನಗೆ ದಯೆ ತೋರಿಸಿದ್ದನು. ಅವನ ಮಗನಾದ ಹಾನೂನನಿಗೆ ನಾನೂ ದಯೆತೋರುವೆನು” ಎಂದು ಹೇಳಿ ಹಾನೂನನನ್ನು ಸಂತೈಸಲು ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನ್ ದೇಶಕ್ಕೆ ಹೋಗಿ ದುಃಖದಲ್ಲಿದ್ದ ಹಾನೂನನನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:2
14 ತಿಳಿವುಗಳ ಹೋಲಿಕೆ  

ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.


ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.


ಆಗ ಅರಸನು, “ಇದಕ್ಕಾಗಿ ಮೊರ್ದೆಕೈಗೆ ಯಾವ ಸ್ಥಾನಮಾನಗಳು ದೊರಕಿದವು?” ಎಂದು ವಿಚಾರಿಸಿದಾಗ ಅವನ ಸಾನ್ನಿಧ್ಯಸೇವಕರಾದ ಪರಿವಾರದವರು, “ಏನೂ ದೊರಕಲಿಲ್ಲ” ಎಂದು ಹೇಳಿದರು.


ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.


ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.


ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು.


ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.


ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ಇದಾದನಂತರ ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗನು ಅರಸನಾದನು.


ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು