Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅಮ್ಮೋನ್ ಪ್ರಭುಗಳು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ, ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿನ ಪ್ರಭುಗಳು ಹಾನೂನನಿಗೆ - ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದಾನೆಂದು ನೆನಸುತ್ತೀಯೋ? ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಬಂದಿದ್ದಾರೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಅಮ್ಮೋನಿಯರ ನಾಯಕರು ಹಾನೂನನಿಗೆ, “ಮೋಸ ಹೋಗಬೇಡ, ದಾವೀದನು ನಿನ್ನ ತಂದೆಯನ್ನು ಗೌರವಿಸಿ ನಿನ್ನನ್ನು ಸಂತೈಸಲು ಸೇವಕರನ್ನು ಕಳುಹಿಸಿದನೆಂದು ಭಾವಿಸಿಕೊಂಡಿರುವೆಯಾ? ಇಲ್ಲ, ಅವನು ನಿನ್ನ ರಾಜ್ಯದಲ್ಲಿ ಹೊಂಚುಹಾಕಲೂ ವಿಷಯಗಳನ್ನು ಸಂಗ್ರಹಿಸಲೂ ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:3
12 ತಿಳಿವುಗಳ ಹೋಲಿಕೆ  

ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.


ಆದರೆ ಫಿಲಿಷ್ಟಿಯ ಪ್ರಭುಗಳು ಅವನ ಮೇಲೆ ಕೋಪಗೊಂಡು ಅವನಿಗೆ, “ಈ ಮನುಷ್ಯನನ್ನು ಕಳುಹಿಸಿಬಿಡು, ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ ಸ್ಥಳದಲ್ಲೇ ವಾಸಿಸಲಿ. ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೆ ಶತ್ರುವಾಗಿ ನಿಂತಾನು, ಫಿಲಿಷ್ಟಿಯರ ತಲೆಗಳನ್ನು ಕಡಿದಿದ್ದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?


ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.


ಅಮ್ಮೋನಿಯರ ರಾಜ ಪ್ರತಿನಿಧಿಗಳು ತಮ್ಮ ಒಡೆಯನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದರಿಂದ ಅವನು ನಿನ್ನ ತಂದೆಯನ್ನು ಸನ್ಮಾನಿಸುವವನು ಎಂದು ನೀನು ತಿಳಿದುಕೊಂಡಿರಬಹುದೋ? ಅವರು ಪಟ್ಟಣವನ್ನು ಸಂಚರಿಸಿ ನೋಡಿ, ಸ್ವಾಧಿನಮಾಡಿಕೊಳ್ಳಬೇಕೆಂದು ತನ್ನ ಪ್ರತಿನಿಧಿಗಳನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು” ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ದೂತರನ್ನು ಕಳುಹಿಸಿದನು. ದಾವೀದನ ಸೇವಕರು ಹಾನೂನನನ್ನು ಸಂತೈಸುವುದಕ್ಕೋಸ್ಕರ ಅಮ್ಮೋನಿಯರ ದೇಶಕ್ಕೆ ಬಂದರು.


ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು