Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಮತ್ತು ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ, ಮಾಕದಿಂದಲೂ, ಚೋಬಾ ರಾಜ್ಯದಿಂದಲೂ ರಥಗಳನ್ನೂ, ರಾಹುತರನ್ನು ತರಿಸುವುದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನೂ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನೂ ಅಮ್ಮೋನಿಯರೂ ತಿಳಿದು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಯಿಂದಲೂ ಅರಾಮ್ ಮಾಕದಿಂದಲೂ ಚೋಬಾರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವದಕ್ಕೋಸ್ಕರ ಸಾವಿರ ತಲಾಂತು ಬೆಳ್ಳಿಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ತಮಗೆ ಶತ್ರುವಾದನೆಂದು ಅಮ್ಮೋನಿಯರಿಗೆ ತಿಳಿದಾಗ ಹಾನೂನನು ಮೂವತ್ನಾಲ್ಕು ಸಾವಿರ ಕಿಲೋಗ್ರಾಂ ತೂಕದ ಬೆಳ್ಳಿಯನ್ನು ಕೊಟ್ಟು ಮೆಸೊಪೊಟೆಮಿಯಾದಿಂದ ರಥಗಳನ್ನೂ ರಾಹುತರನ್ನೂ ಕೊಂಡುಕೊಂಡನು. ಅಲ್ಲದೆ ಅರಾಮದ ಮಾಕ ಮತ್ತು ಚೋಬಾ ಪಟ್ಟಣಗಳಿಂದ ರಥಗಳನ್ನು ಮತ್ತು ರಾಹುತರನ್ನು ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 19:6
21 ತಿಳಿವುಗಳ ಹೋಲಿಕೆ  

ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.


ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು


ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನೂ ದಾರಿತಪ್ಪಿದವನು, ಎಲ್ಲರೂ ಕೆಟ್ಟು ಹೋದವರೇ.


ಅಮ್ಮೋನಿಯರ ಅರಸರೊಡನೆ ಯುದ್ಧ ಮಾಡಿ ಅವರನ್ನು ಗೆದ್ದನು. ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತು ಸಾವಿರ ಕೋರ್ (ಸಾವಿರ ಮೆಟ್ರಿಕ್ ಟನ್) ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.


ಇದಲ್ಲದೆ ಅವನು ನೂರು ತಲಾಂತು ಬೆಳ್ಳಿಯನ್ನು ಕೊಟ್ಟು, ಇಸ್ರಾಯೇಲರಿಂದಲೂ ಲಕ್ಷ ಮಂದಿ ಭಟರನ್ನು ತರಿಸಿದನು.


ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.


ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.


ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.


ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.


ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.


ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.


ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದಾಗ ಅವನು ಬಹಳ ಅವಮಾನಹೊಂದಿ ಅವರಿಗೆ ಆಳುಗಳ ಮುಖಾಂತರವಾಗಿ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿದ್ದು ಅನಂತರ ಬನ್ನಿರಿ” ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು