Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ ಆಕಾರನು ಕರ್ಮೀಯಿಂದ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 (ಕರ್ಮೀಯು ಜಿಮ್ರಿಯ ಮಗನು.) ಜಿಮ್ರಿಯು ಆಕಾನನ ಮಗನು. ಈ ಆಕಾನನು ಯುದ್ಧದಲ್ಲಿ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರೇಲರಿಗೆ ದೊಡ್ಡ ಆಪತ್ತನ್ನು ತಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:7
10 ತಿಳಿವುಗಳ ಹೋಲಿಕೆ  

ನೀವಾದರೋ ಯೆಹೋವನಿಗೆ ಅರ್ಪಿಸುವ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ, ಇಸ್ರಾಯೇಲ್ಯರ ಪಾಳೆಯವು ಶಾಪಕ್ಕೆ ಗುರಿಯಾಗಿ ನಾಶವಾದೀತು.


ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.


ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.


ಯೆಹೂದನ ಸಂತಾನದವರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.


ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು