Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕೆ ದಾವೀದನು, “ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸುವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:24
9 ತಿಳಿವುಗಳ ಹೋಲಿಕೆ  

ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.


“ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ಅರಸನು ಅರೌನನಿಗೆ, “ಹಾಗಲ್ಲ, ನಾನು ಅವುಗಳನ್ನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಉಚಿತವಾಗಿ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲಾರೆ” ಎಂದು ಹೇಳಿ ಆ ಕಣವನ್ನೂ ಮತ್ತು ಹೋರಿಗಳನ್ನೂ ಐವತ್ತು ಶೆಕಲ್ ಬೆಳ್ಳಿಗೆ ಕೊಂಡುಕೊಂಡನು.


ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಯಜ್ಞಮಾಡೋಣವಾಗಲಿ. ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆಗಳೂ, ನೈವೇದ್ಯಕ್ಕೋಸ್ಕರ ಗೋದಿಯೂ ಇರುತ್ತವೆ. ಇವೆಲ್ಲವನ್ನೂ ಕೊಡುತ್ತೇನೆ” ಎಂದು ಹೇಳಿದನು.


ದಾವೀದನು ಆ ಭೂಮಿಗೋಸ್ಕರ ಅವನಿಗೆ ಆರುನೂರು ಶೆಕಲ್ ಬಂಗಾರವನ್ನು ಕೊಟ್ಟನು.


ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಈ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು