Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೋವಾಬನು - ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದನ್ನು ಅಪೇಕ್ಷಿಸುವದೇನು? ಇಸ್ರಾಯೇಲ್ಯರನ್ನು ಅಪರಾಧಕ್ಕೆ ಗುರಿಮಾಡುವದೇಕೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:3
15 ತಿಳಿವುಗಳ ಹೋಲಿಕೆ  

ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.


ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.


ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ, ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವ ಹಾಗೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರುದ್ಧವಾಗಿ ಕಳುಹಿಸಿದನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.


ಆಗ ಮೋಶೆ ಆರೋನನನ್ನು ಕುರಿತು, “ನೀನು ಈ ಜನರಿಂದ ಮಹಾ ಅಪರಾಧವನ್ನು ಮಾಡಿಸಿದಿಯಲ್ಲಾ ಹೀಗೆ ಮಾಡಿಸುವುದಕ್ಕೆ ಇವರು ನಿನಗೇನು ಮಾಡಿದರು?” ಎಂದು ವಿಚಾರಿಸಲು,


ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,


ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.


“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು