Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಕಲ್ಲುಕುಟಿಗರೂ, ಶಿಲ್ಪಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಇನ್ನೂ ಹೆಚ್ಚು ಕೂಡಿಸುವಿ. ಇದಲ್ಲದೆ ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಬಳಿಯಲ್ಲಿ ಅನೇಕ ಬಡಗಿಗಳು ಮತ್ತು ಕಲ್ಲುಕುಟಿಗರು ಇದ್ದಾರೆ. ಬೇರೆ ಕೆಲಸಗಳ ಕುಶಲಕರ್ಮಿಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:15
10 ತಿಳಿವುಗಳ ಹೋಲಿಕೆ  

ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.


ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”


ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸವನ್ನು ಮಾಡುವುದಕ್ಕೂ,


ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.


ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.


ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು