Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ ನೀವು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ಒಡಂಬಡಿಕೆ ಮಂಜೂಷವನ್ನೂ, ದೇವಾರಾಧನೆಯ ಪವಿತ್ರ ಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ನೀವು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ನಿಬಂಧನ ಮಂಜೂಷವನ್ನೂ ದೇವಾರಾಧನಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:19
24 ತಿಳಿವುಗಳ ಹೋಲಿಕೆ  

ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.


ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.


ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.


ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.


ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ” ಎಂದು ಹೇಳಿದನು.


ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.


“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.


ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಬಡಗಿಗಳೂ, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣಗಳ ಎಲ್ಲಾ ತರಹದ ಕೆಲಸವನ್ನು ಮಾಡುವುದರಲ್ಲಿ ಜಾಣರು ನಿನ್ನೊಂದಿಗಿರುತ್ತಾರೆ. ಅವರನ್ನು ಎಣಿಸಲು ಸಾಧ್ಯವಿಲ್ಲ. ಎದ್ದು ಸಿದ್ಧನಾಗಿ ಕೆಲಸಕ್ಕೆ ಕೈ ಹಾಕು, ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ, ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,


ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.


ಆತನ ಪರಿಶುದ್ಧನಾಮದಲ್ಲಿ ಸಂತೋಷಪಡಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ನಿತ್ಯವೂ ಅಪೇಕ್ಷಿಸಿ ಹರ್ಷಿಸಲಿ.


ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು