Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚಾರಿಕೆಯನ್ನು ನಡೆಸುತ್ತಿದ್ದರು. ಅವರ ಕೆಲಸಗಳು ಯಾವುದೆಂದರೆ, ಅಂಗಳಗಳ ಕೋಣೆಗಳನ್ನು ಸ್ವಚ್ಛಮಾಡಿ ನೋಡಿಕೊಳ್ಳುವುದೂ, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಯೆಹೋವನ ಆಲಯದ ಪರಿಚರ್ಯೆಯನ್ನು ನಡಿಸುತ್ತಿದ್ದರು. ಅವರ ಕೆಲಸಗಳು ಯಾವವಂದರೆ - ಅಂಗಳ ಕೋಣೆಗಳನ್ನು ನೋಡಿಕೊಳ್ಳುವದೂ ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧ ಮಾಡುವದೂ ದೇವಾಲಯದಲ್ಲಿ ಸೇವೆಮಾಡುವದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:28
28 ತಿಳಿವುಗಳ ಹೋಲಿಕೆ  

ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು.


ಆಗ ಹಿಜ್ಕೀಯನು ಯೆಹೋವನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.


ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.


ಒಳಗಿನ ಅಂಗಳಕ್ಕೆ ಸೇರಿದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ, ಹೊರಗಿನ ಅಂಗಳದ ಕಲ್ಲುಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಿದ್ದವು ಅವುಗಳಲ್ಲಿ ಪಡಸಾಲೆಗಳಿದ್ದವು.


ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಇದ್ದವು. ಅವುಗಳ ಮೇಲೆ ಖರ್ಜೂರ ಮರಗಳು ಚಿತ್ರಿತವಾಗಿದ್ದವು ಮತ್ತು ಮೇಲೆ ತೂಗಾಡುವ ಮೇಲ್ಛಾವಣಿಗಳು ಇದ್ದವು.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.


ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು.


ಆದುದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿ ಇಡುವವರೆಗೂ ಕಾಯಿರಿ” ಎಂದು ಹೇಳಿದನು.


ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು


ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,


ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.


ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರೆಲ್ಲರೂ ಪರಿಗಣಿಸಲ್ಪಟ್ಟರು.


ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,


ಯಾಜಕರೂ ಹಾಗು ಸೇವೆಯಲ್ಲಿರುವ ಲೇವಿಯರು ಹೊರತಾಗಿ ಯಾರೂ ಆಲಯದೊಳಗೆ ಬರಬಾರದು. ಏಕೆಂದರೆ ಅವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರೂ ಯೆಹೋವನ ಅಜ್ಞಾನುಸಾರವಾಗಿ ಹೊರಗಿರಬೇಕು.


ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.


ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.


ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು