Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:1
16 ತಿಳಿವುಗಳ ಹೋಲಿಕೆ  

ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆಗಿದ್ದ, ಎಲೀಶೇಬಳನ್ನು ಮದುವೆಯಾದನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.


ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು.


ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವವರು ಹುಟ್ಟಿದರು.


ಆರೋನನ ಮಕ್ಕಳ ಹೆಸರುಗಳು: ಚೊಚ್ಚಲ ಮಗನಾದ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರೇ.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಮತ್ತು ಮಿರ್ಯಾಮ್. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.


ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.


ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು


ಮಹಾ ಪರಿಶುದ್ಧ ಸ್ಥಳದಿಂದ ಯಾಜಕರು ಹೊರಗೆ ಬಂದರು. ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಮಾಡಿಕೊಂಡಿದ್ದರು.


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ಆದರೆ ನಾದಾಬ್ ಮತ್ತು ಅಬೀಹೂ ಎಂಬುವವರು ಸೀನಾಯಿ ಮರುಭೂಮಿಯಲ್ಲಿ ಯೆಹೋವನು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಆತನ ಸನ್ನಿಧಿಯಲ್ಲೇ ಸತ್ತು ಹೋದರು. ಅವರಿಗೆ ಮಕ್ಕಳಿರಲಿಲ್ಲ. ಆದುದರಿಂದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬಿಬ್ಬರು ತಮ್ಮ ತಂದೆಯಾದ ಆರೋನನ ಕೈಕೆಳಗೆ ಯಾಜಕಧರ್ಮವನ್ನು ನಡೆಸಿದರು.


ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ.


ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು