Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರತಿಯೊಂದು ಕುಲದಿಂದ ಚೀಟುಹಾಕುವುದರ ಮೂಲಕ ಜನರನ್ನು ಆರಿಸಿಕೊಳ್ಳಲಾಯಿತು. ಕೆಲವರನ್ನು ಪವಿತ್ರ ಸ್ಥಳದ ಸೇವೆಗಾಗಿ ಆರಿಸಿಕೊಳ್ಳಲಾಯಿತು; ಇನ್ನು ಕೆಲವರನ್ನು ಯಾಜಕರಾಗಿ ಸೇವೆಮಾಡಲು ಆರಿಸಿಕೊಳ್ಳಲಾಯಿತು; ಇವರೆಲ್ಲರೂ ಎಲ್ಲಾಜಾರ್ ಮತ್ತು ಈತಾಮಾರನ ಕುಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:5
17 ತಿಳಿವುಗಳ ಹೋಲಿಕೆ  

ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.


ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.


ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.


ಆನಂತರ ಅವರಿಗೋಸ್ಕರ ಚೀಟುಹಾಕಿದರು; ಚೀಟು ಮತ್ತೀಯನ ಪರವಾಗಿ ಬಿದ್ದುದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಸೇರಿಕೊಂಡನು.


ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,


ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು


ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.


ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.


ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ, ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ, ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.


ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.


ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟು ಹಾಕಿ ದೇಶವನ್ನು ಅವರ ಕುಲಗಳಿಗೆ ಹಂಚಿಕೊಟ್ಟನು.


ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,


ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.


ಇವರಲ್ಲಿ ಹಿರಿಯರು, ಕಿರಿಯರು, ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾ ಕ್ರಮವನ್ನು ಗೊತ್ತುಮಾಡಿಕೊಂಡರು.


ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು