Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ದಾವೀದನು ಮತ್ತು ಗುಡಾರದ ಸೇವೆ ಸಲ್ಲಿಸುತ್ತಿದ್ದ ಪ್ರಧಾನರು ಆಸಾಫ್ಯ, ಹೇಮಾನ್ಯ ಮತ್ತು ಯೆದುತೂನ್ಯರ ಮಕ್ಕಳನ್ನು ಸೇವೆ ಮಾಡುವುದಕ್ಕೋಸ್ಕರ ಆಯ್ಕೆಮಾಡಿದರು. ಇವರು ಕಿನ್ನರಿ, ಸ್ವರಮಂಡಲ, ತಾಳ, ಇವುಗಳನ್ನು ನುಡಿಸುತ್ತಾ, ಪ್ರವಾದಿಸುತ್ತ, ಗಾಯನಮಾಡುತ್ತಿದ್ದರು. ಆ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:1
46 ತಿಳಿವುಗಳ ಹೋಲಿಕೆ  

ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ.


ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ.


ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.


ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.


ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ ಇವರೇ. ಕಿನ್ನರಿಯನ್ನು ನುಡಿಸುತ್ತಾ ಪರವಶರಾಗಿ ಯೆಹೋವನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನ್ಯನಿಗೆ ಈ ಆರು ಜನರೂ ಸಹಾಯಕರಾಗಿದ್ದರು.


ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ದೇವಾಲಯದಲ್ಲಿಟ್ಟಿದ್ದ ಅರಸನಾದ ದಾವೀದನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕನಾದ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.


ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.


ಅವನು ಇಸ್ರಾಯೇಲರ ಎಲ್ಲಾ ಅಧಿಪತಿಗಳನ್ನೂ, ಯಾಜಕರನ್ನೂ ಮತ್ತು ಲೇವಿಯರನ್ನೂ ತನ್ನ ಬಳಿಯಲ್ಲಿ ಒಟ್ಟುಗೂಡಿಸಿದನು.


ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,


ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ.


ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.


ಆಸಾಫ್ಯರಲ್ಲಿ ಜಕ್ಕೂರ್, ಯೋಸೇಫ್, ನೆತನ್ಯ, ಅಶರೇಲ ಎಂಬವರು. ಇವರು ಅರಮನೆಯ ಗಾಯಕನಾದ ಆಸಾಫನ ಸಹಾಯಕರು.


ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು.


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮ ಸಮರ್ಪಣೆ ಮಾಡುವುದೇ ಅವರ ಕರ್ತವ್ಯವಾಗಿತ್ತು.


ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ.


ಆ ಮೇಲೆ ಅವನು ನನ್ನನ್ನು ಒಳಗಣ ಅಂಗಳಕ್ಕೆ ಕರೆ ತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರದ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ಒಂದು ಕೋಣೆಯು ಉತ್ತರಕ್ಕೂ, ಇನ್ನೊಂದು ಕೋಣೆಯು ದಕ್ಷಿಣಕ್ಕೂ ಇತ್ತು.


ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.


ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.


ದಾವೀದನೂ ಎಲ್ಲಾ ಇಸ್ರಾಯೇಲರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತ್ತೂರಿ ಇವುಗಳನ್ನು ಬಾರಿಸುತ್ತಾ ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ಹೀಗೆ ಎಲ್ಲಾ ಇಸ್ರಾಯೇಲರು ಆನಂದ ಘೋಷಣೆಗಳಿಂದಲೂ, ಕೊಂಬು ಮತ್ತು ತುತ್ತೂರಿಗಳನ್ನು, ತಾಳ, ತಂತಿ ವಾದ್ಯಗಳ ಸಂಗೀತದಿಂದ ತಾಳಹಾಕುತ್ತಾ ಕಿನ್ನರಿ ಸ್ವರಮಂಡಲಗಳನ್ನು ನುಡಿಸುತ್ತಾ, ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತಂದರು.


ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.


ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ,


ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್,


ಗಾಯಕರಲ್ಲಿ: ಆಸಾಫ್ಯರು 128


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ಮೀಕನ ಮಗನೂ, ಜಬ್ದೀಯನ ಮೊಮ್ಮಗನೂ, ಆಸಾಫನ ಮರಿಮಗನೂ, ಪ್ರಾರ್ಥನೆಯ ಸಮಯದಲ್ಲಿ ಕೃತಜ್ಞತಾಸ್ತುತಿಯನ್ನು ಆರಂಭಿಸುತ್ತಾ ಆರಾಧನೆಯಲ್ಲಿ ಜನರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನೂ, ಗಾಲಾಲನ ಮೊಮ್ಮಗನೂ, ಯೆದೂತೂನನ ಮರಿಮಗನೂ ಆದ ಅಬ್ದ ಎಂಬುವವರು,


ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು