17 ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು,
17 ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.
17 ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.
ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.
ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ, ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.