Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೇಲೆ ಕಂಡವರ ಕುಲಬಂಧುಗಳೂ ದೇವಾಲಯದ ಭಂಡಾರ, ಪರಿಶುದ್ಧವಸ್ತುಗಳ ಭಂಡಾರ ಇವುಗಳನ್ನು ಕಾಯುವವರೂ ಆದ ಲೇವಿಯರ ಪಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:20
21 ತಿಳಿವುಗಳ ಹೋಲಿಕೆ  

ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.


ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.


ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು.


ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.


ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ.


ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,


ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”


ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.


ನಾನು ಅವರಿಗೆ, “ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ, ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪೂರ್ವಿಕರ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು