Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಶೆಲೋಮೋತನೂ ಅವನ ಸಹೋದರರೂ ಪ್ರತಿಷ್ಠಿತವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರಬಂಧುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:26
13 ತಿಳಿವುಗಳ ಹೋಲಿಕೆ  

ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,


ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು.


ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.


ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು.


ಲೇವಿಯ ಎಲ್ಲಾ ಯೆಹೂದ್ಯರೂ ಯಾಜಕನಾದ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ ದಿನದಲ್ಲಿ ಸೇವಾ ವಿಮುಕ್ತರಾದ ವರ್ಗಗಳವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈಕೆಳಗಿನವರನ್ನು ಸೇರಿಸಿಕೊಂಡನು.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.


ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139.


ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು