Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಧೈರ್ಯವಾಗಿದ್ದು ಬಲಗೊಳ್ಳು ಮತ್ತು ಈ ಕಾರ್ಯವನ್ನು ಮಾಡಿ ಮುಗಿಸು. ನನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವದರಿಂದ ನೀನು ಭಯಪಡುವ ಕಾರಣವೇ ಇಲ್ಲ. ಆತನು ನಿನ್ನೊಂದಿಗಿದ್ದು ಆಲಯವನ್ನು ಸಂಪೂರ್ಣ ಮಾಡುವಂತೆ ನಿನ್ನನ್ನು ನಡೆಸುತ್ತಾನೆ. ನೀನು ಯೆಹೋವನ ಆಲಯವನ್ನು ಕಟ್ಟುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:20
17 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲರಿಗೆ ಕೊಟ್ಟ ವಿಧಿನ್ಯಾಯಗಳನ್ನು ನೀನು ಕೈಕೊಳ್ಳುವುದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.


ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.


ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.


ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ಈ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು