Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ಆಲಯ ಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು. ಇವೆಲ್ಲಾ ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧನಾಮಕ್ಕೋಸ್ಕರ ಆಲಯಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು; ಇವೆಲ್ಲಾ ನಿನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವುದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧಪಟ್ಟವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:16
8 ತಿಳಿವುಗಳ ಹೋಲಿಕೆ  

ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.


ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ಮೊದಲನೆಯವನು ಆತನ ಮುಂದೆ ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಹತ್ತು ನಾಣ್ಯಗಳು ಸಂಪಾದನೆಯಾದವು’ ಅನ್ನಲು,


ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು