Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ದರ್ಶಿ ಸಮುವೇಲ, ಪ್ರವಾದಿ ನಾತಾನ ಹಾಗೂ ದರ್ಶಿ ಗಾದ, ಇವರ ಚರಿತ್ರೆಗಳಲ್ಲಿ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕಾರ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:30
7 ತಿಳಿವುಗಳ ಹೋಲಿಕೆ  

ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


“ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.


ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.


ದಾವೀದನ ಮಗನಾದ ಸೊಲೊಮೋನನು ತನ್ನ ರಾಜ್ಯದಲ್ಲಿ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಯೆಹೋವನು ಅವನ ಸಂಗಡ ಇದ್ದು ಅವನನ್ನು ಬಲಾಢ್ಯನಾಗುವಂತೆ ಆಶೀರ್ವದಿಸಿ ನಡೆಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು