Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು. ನಾಲ್ಕನೆಯವನು ಅದೋನೀಯ; ಇವನು ಹಗ್ಗೀತಳ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 3:2
20 ತಿಳಿವುಗಳ ಹೋಲಿಕೆ  

ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು.


ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.


ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.


ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.


ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ


ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.


ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.


ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.


ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.


ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು.


ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.


ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.


ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.


ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು: ಚೊಚ್ಚಲಮಗನು ಅಮ್ನೋನನು, ಇವನು ಇಜ್ರೇಲಿನವಳಾದ ಅಹೀನೋವಮಳಲ್ಲಿ ಹುಟ್ಟಿದವನು. ಎರಡನೆಯವನು ದಾನಿಯೇಲನು, ಇವನು ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದವನು.


ಐದನೆಯವನು ಶೆಫಟ್ಯ, ಇವನು ಅಬೀಟಲಳ ಮಗನು. ಆರನೆಯವನು ಇತ್ರಾಮ್. ಇವನು ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದವನು.


ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು