Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಪ್ರಬಲನಾದದರಿಂದಲೂ ರಾಜ್ಯಾಧಿಕಾರವು ಇವನ ಕುಲಕ್ಕೆ ಬಂದದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲನೆಂದು ಲಿಖಿತನಾಗಲಿಲ್ಲ; ಆದರೂ ಚೊಚ್ಚಲನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:2
25 ತಿಳಿವುಗಳ ಹೋಲಿಕೆ  

“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.


ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.


ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.


ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು


ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.


ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.


ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.


ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು.


ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.


ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.


ಐಗುಪ್ತ ದೇಶಕ್ಕೆ ನಿನ್ನ ಬಳಿಗೆ ಬರುವುದಕ್ಕಿಂತ ಮೊದಲು ಇಲ್ಲಿ ಹುಟ್ಟಿದ ನಿನ್ನಿಬ್ಬರು ಮಕ್ಕಳು ನನಗೆ ಮಕ್ಕಳಾಗಿರಬೇಕು. ರೂಬೇನ್ ಸಿಮೆಯೋನರು ನನ್ನ ಮಕ್ಕಳಾಗಿರುವಂತೆಯೆ ಎಫ್ರಾಯೀಮ್ ಮನಸ್ಸೆಯರೂ ನನ್ನ ಮಕ್ಕಳಾಗಿರಲಿ.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು