Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:20
35 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.


ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.


ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.


ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.


ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.


ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು.


ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.


ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.


ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.


ಆದುದರಿಂದ ನಾವು ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಗಾದನ ಮೇಲೆ ಸುಲಿಗೆ ಮಾಡುವವರು ಬೀಳಲು, ಇವನು ಅವರನ್ನು ಹಿಮ್ಮಟ್ಟಿಕೊಂಡು ಹೋಗುವನು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.


ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು