Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜಾಬಾದ್, ಶೂತೆಲಹ ಎಂಬವರು. ಶೂತೆಲಹನಲ್ಲದೆ ಎಫ್ರಯಿಮನಿಗೆ ಎಜೆರ್, ಎಲ್ಲಾದ್ ಎಂಬಿಬ್ಬರು ಮಕ್ಕಳಿದ್ದರು. ಇವರು ಗತ್‍ನ ಮೂಲನಿವಾಸಿಗಳ ದನಗಳನ್ನು ಕದಿಯಲು ಪ್ರಯತ್ನಿಸಿದಾಗ ಕೊಲೆಗೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇವನ ಮಗನು ಜಾಬಾದ್; ಇವನ ಮಕ್ಕಳು - ಶೂತೆಲಹ, ಎಜೆರ್, ಎಲ್ಲಾದ್ ಎಂಬವರು. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದದರಿಂದ ಆ ದೇಶದ ಮೂಲನಿವಾಸಿಗಳು ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 7:21
6 ತಿಳಿವುಗಳ ಹೋಲಿಕೆ  

ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್;


ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು.


ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು