Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ ಅವನ ಗೋತ್ರ ಬಂಧುಗಳಾದ ವಿುಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕಸೇವೆಗೆ ನೇವಿುಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶಸ್ಥಳವನ್ನು ಕಾಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:19
16 ತಿಳಿವುಗಳ ಹೋಲಿಕೆ  

ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.


ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.


ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.


ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,


ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.


ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು