Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 9:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಮಂದಿ; ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಗಳಲ್ಲಿ ಲಿಖಿತವಾಗಿದ್ದವು. ದಾವೀದನೂ ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೋಗಕ್ಕೆ ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 9:22
18 ತಿಳಿವುಗಳ ಹೋಲಿಕೆ  

(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)


ಯಾಜಕರ ಮತ್ತು ಲೇವಿಯರ ವರ್ಗಗಳು, ಯೆಹೋವನ ಆಲಯದಲ್ಲಿ ನಡೆಯತಕ್ಕ ಎಲ್ಲಾ ಆರಾಧನೆ, ಆರಾಧನೆಯ ಎಲ್ಲಾ ಸಾಮಗ್ರಿಗಳು


ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.


ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು.


ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.


ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬುವವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ನಂಬಿಕೆಯಿಂದ ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ಭೇದಮಾಡದೆ ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು.


ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.


ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.


ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.


ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ದಾವೀದನ ಪೂರ್ವೋತ್ತರಚರಿತ್ರೆ ಅವನ ಆಳ್ವಿಕೆ, ಪರಾಕ್ರಮ ಅವನಿಗೂ ಇಸ್ರಾಯೇಲರಿಗೂ, ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು