Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಪರಿಶುದ್ಧನಾಗಿರುವಂತೆ ನಿಮ್ಮ ನಡೆನುಡಿಗಳು ಪರಿಶುದ್ಧವಾಗಿರಲಿ. ನಿಮ್ಮನ್ನು ಕರೆದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಸೆ ತುಮ್ಕಾ ಬಲ್ವಲ್ಲೊ ದೆವ್ ಬರೊ, ತಸೆ ತುಮಿಬಿ ತುಮ್ಚ್ಯಾ ಸಗ್ಳ್ಯಾ ಚಾಲಿತ್ನಿ ಬರೆ ಹೊವಾ, ಪವಿತ್ರ್ ಪುಸ್ತಕಾತ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:15
32 ತಿಳಿವುಗಳ ಹೋಲಿಕೆ  

ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,


ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು