Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 1:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ಖರ್‍ಯಾಕ್ ತುಮಿ ಖಾಲ್ತಿ ಹೊಲ್ಲ್ಯಾ ಸಾಟ್ನಿ ತುಮ್ಚೆ ಆತ್ಮೆ ನಿತಳ್ ಹೊಲ್ಲೆ ಹಾಸಿ, ಅನಿ ತುಮ್ಚ್ಯಾ ಭಾವಾ-ಭೆನಿಯಾಂಚ್ಯಾ ಮದ್ದಿ ಎಕ್ ನಿತಳ್ ಪ್ರೆಮ್ ತುಮ್ಚ್ಯಾ ಭುತ್ತುರ್ ಉಗಡಲ್ಲೊ ಹಾಯ್, ತಸೆ ಮನುನ್ ಸಗ್ಳ್ಯಾ ಮನಾನ್, ಅನಿ ಸೊಡಿನಾಸ್ತಾನಾ ಎಕಾಮೆಕಾಚೊ ಪ್ರೆಮ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 1:22
51 ತಿಳಿವುಗಳ ಹೋಲಿಕೆ  

ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.


ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.


ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.


ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.


ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.


ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.


ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.


ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.


ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?


ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.


ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.


ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು