Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನಿಮ್ಮ ತಪ್ಪಿಗಾಗಿ ನೀವು ದಂಡಿಸಲ್ಪಟ್ಟರೆ ಆ ದಂಡನೆಯನ್ನು ನೀವು ಅನುಭವಿಸಿದ್ದಕ್ಕೆ ನಿಮಗೇನೂ ಕೀರ್ತಿ ಬರುವುದಿಲ್ಲ. ಆದರೆ ನೀವು ಒಳ್ಳೆಯದನ್ನು ಮಾಡಿದ್ದರಿಂದ ಸಂಕಟಕ್ಕೆ ಒಳಗಾಗಿ ಅದನ್ನು ತಾಳ್ಮೆಯಿಂದ ಸಹಿಸಿಕೊಂಡರೆ ಅದು ದೇವರನ್ನು ಸಂತೋಷ ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕಶ್ಯಾಕ್ ಮಟ್ಲ್ಯಾರ್, ತಿಯಾ ಚುಕ್ ಕರುನ್ ತೆಚಿ ಶಿಕ್ಷಾ ಸೊಸಲ್ಲ್ಯಾರ್ ತುಕಾ ಕಾಯ್ ಗಾವಲ್ಲ್ಯಾಸಾರ್ಕೆ ಹೊಲೆ? ಖರೆ ತುಮಿ ಬರೆ ಕರುನ್ ತುಮ್ಕಾ ಕಸ್ಟ್ ಸೊಸ್ಲ್ಯಾರ್ ತೆಚ್ಯಾ ಸಾಟ್ನಿ ದೆವ್ ಆಶಿರ್ವಾದ್ ದಿತಾ, ತೊ ತರಾಸ್ ತಾಳ್ಮೆನ್ ಸೊಸುನ್ ಘೆಟಲೆ ಹೊಲ್ಯಾರ್ ತೆ ದೆವಾಕ್ ಉಮ್ಮೆದ್ ಅನಿ ಖುಶಿ ಹೊಯ್ ಸಾರ್ಕೆ ಕರ್ತಾ, ದೆವಾ ತುಮ್ಕಾ ಹೆಚ್ಯಾ ಸಾಟ್ನಿ ಆಶಿರ್ವಾದ್ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:20
14 ತಿಳಿವುಗಳ ಹೋಲಿಕೆ  

ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.


ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.


ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.


“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.


ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.


ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ,


ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.


ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.


ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು