Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು. ನೀವು ಅನುಸರಿಸತಕ್ಕ ಮಾದರಿಯು ಕ್ರಿಸ್ತನೇ ಆಗಿದ್ದಾನೆ. ಆತನು ಮಾಡಿದಂತೆ ನೀವೂ ಮಾಡಿರಿ. ನೀವು ಸಂಕಟವನ್ನು ಅನುಭವಿಸುವಾಗ ತಾಳ್ಮೆಯಿಂದಿರಬೇಕು, ಏಕೆಂದರೆ ಕ್ರಿಸ್ತನು ನಿಮಗಾಗಿ ಸಂಕಟಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಸಾಟ್ನಿ ಬಲ್ವುನ್ ಹೊಲಾ ಕ್ರಿಸ್ತಾನ್ ಬಿ ತುಮ್ಚ್ಯಾ ಸಾಟ್ನಿ ಕಸ್ಟ್ ಹೊವ್ನ್ ಹಾಯ್ ತೆಚ್ಯಾ ಸಾಟ್ನಿ ತುಮಿ ತೆಚ್ಯಾ ಸಾರ್ಕೆ ಚಲುಚೆ ಕ್ರಿಸ್ತಾಚ್ಯಾ ಸಾರ್ಕೆಚ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:21
30 ತಿಳಿವುಗಳ ಹೋಲಿಕೆ  

ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.


ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.


ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.


ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.


ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.


ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.


ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು