Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೇತ್ರನು 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ದಾರಿ ತಪ್ಪಿದ ಕುರಿಗಳಾಗಿದ್ದಿರಿ. ಆದರೆ ಈಗ ನೀವು ನಿಮ್ಮ ಕುರುಬನ ಬಳಿಗೆ ಅಂದರೆ ನಿಮ್ಮ ಆತ್ಮಗಳನ್ನು ಕಾಪಾಡುವಾತನ ಬಳಿಗೆ ಹಿಂತಿರುಗಿ ಬಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಕಶ್ಯಾಕ್ ಮಟ್ಲ್ಯಾರ್, ತುಮಿ ವಾಟ್ ಚುಕುನ್ ಗೆಲ್ಲ್ಯಾ ಬಕ್ರ್ಯಾಂಚ್ಯಾ ಸಾರ್ಕೆ ಹೊತ್ಯಾಶಿ ಖರೆ ಅತ್ತಾ ತುಮ್ಕಾ ತುಮ್ಚ್ಯಾ ಮುಖಂಡಾಕ್ಡೆ ಅನಿ ತುಮ್ಚೆ ಆತ್ಮೆ ರಾಕ್ತಲ್ಯಾಕ್ಡೆ ಹಾನುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೇತ್ರನು 2:25
24 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.


“ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆಯೂ, ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನೂ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು